ಬೆಳಗಾವಿ: ಏನ್ ಅಶೋಕ ಸಣ್ಣ ಅಗಿದಿಯಲ್ಲಾ…ಹೀಗೆ ಕಿಚಾಯಿಸಿದ್ದು ಸಿಎಂ ಸಿದ್ದರಾಮಯ್ಯ.
ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಅಶೋಕ್, ಸುನೀಲ್ ಕುಮಾರ್ ಮುಖಾಮುಖಿಯಾದ ವೇಳೆ ಮುಖ್ಯ ಮಂತ್ರಿಗಳು ರೇಗಿಸಿದರು.
ಸಿಎಂ ಬರುವ ಮುಂಚೆಯೇ ಸ್ಪೀಕರ್ ಖಾದರ್ ಅವರನ್ನು ಅಶೋಕ್, ಸುನೀಲ್ ಕುಮಾರ್ ಭೇಟಿಯಾಗಿದ್ದರು. ಈ ವೇಳೆ ಆಗಮಿಸಿದ ಸಿದ್ದರಾಮಯ್ಯನವರಿಗೆ ಕೈಕುಲುಕಿ ವಿಪಕ್ಷ ನಾಯಕರು ಶುಭ ಕೋರಿದರು.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಾಡ್ತೀರೇನಪ್ಪಾ ಎಂದು ನಗುನಗುತ್ತಲೇ ಸಿಎಂ ರೇಗಿಸಿದರು.ಆಗ ಇಬ್ಬರು ನಾಯಕರು ಉತ್ತರ ನೀಡದೇ ನಕ್ಕಿದರು.
ಅಶೋಕ್ ಅವರಿಗೆ ಸಿದ್ದರಾಮಯ್ಯ, ಏನ್ ಸಣ್ಣ ಆಗಿದ್ದೀಯಾ ಅಶೋಕ್ ಎಂದು ಕಿಚಾಯಿಸಿದರು. ಅದಕ್ಕೆ ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ ಸರ್, ನಾನು ಎಲ್ಲವನ್ನು ಬಿಟ್ಟಿದ್ದೀನಿ ಎಂದು ನಗುತ್ತಲೇ ಟಾಂಗ್ ನೀಡಿದರು.
ಅದಕ್ಕೆ ಸಿಎಂ, ಹೇ.. ತಿನ್ನು ಏನೂ ಆಗಲ್ಲ. ಬಾ ತಿನ್ನೋಣ ಎಂದು ಕರೆದರು. ಇದಕ್ಕೆ ಅಶೋಕ್ ನಗುತ್ತಾ ಮುಂದೆ ಸಾಗಿದರು.

