ಲಕ್ಷ್ಮಿ ಹೆಬ್ಬಾಳ್ಳರ್ ವಜಾಗೆ ಹೇಮಾ ನಂದೀಶ್ ಆಗ್ರಹ

ಮೈಸೂರು: ವಿಧಾನಸಭಾ ಅಧಿವೇಶನದಲ್ಲಿ ಫಲಾನುಭವಿ ಗಳಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಖಾತೆಗೆ ವರ್ಗಾವಣೆ ಮಾಡಿರು ವುದಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ‌ರ್ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಬಿಜೆಪಿ ಮುಖಂಡರಾದ ಹೇಮನಂದೀಶ್ ಆಗ್ರಹಿಸಿದ್ದಾರೆ.

ಒಬ್ಬ ಜವಾಬ್ದಾರಿಯುತ ಸಚಿವರಾಗಿ ಸದನದಲ್ಲಿ ತಪ್ಪು ಮಾಹಿತಿ ನೀಡಿರುವುದು ಅಕ್ಷಮ್ಯ ಅಪರಾಧವಾಗಿದೆ. ರಾಜ್ಯದ ಮಹಿಳೆಯರ ಬಗ್ಗೆ ವಿಪರೀತ ಕಾಳಜಿ ತೋರುವ ಪ್ರಹಸನ ಮಾಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಬಗ್ಗೆ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಸಚಿವೆ ರಾಜ್ಯದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಪೊಳ್ಳು ಭರವಸೆಯ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಈ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲು ವಿಫಲವಾಗಿ ಪ್ರಜಾಪ್ರಭುತ್ವದ ದೇಗುಲದಲ್ಲಿ ಸುಳ್ಳು ಮಾಹಿತಿಯನ್ನು ನೀಡುವ ಹಂತಕ್ಕೆ ಬಂದಿದ್ದು ವಿಪರ್ಯಾಸ ಎಂದು ಹೇಮಾ ನಂದೀಶ್ ಹೇಳಿದ್ದಾರೆ.