ಬೆಂಗಳೂರು: ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿ ದ್ದಾರೆ.
ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ 30,000 ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ 3 ತಿಂಗಳಿಂದ ಸಂಬಳವಾಗಿಲ್ಲ ಎಂದು ಟ್ವೀಟ್ ಮಾಡಿ ಕಟುವಾಗಿ ಟೀಕಿಸಿದ್ದಾರೆ.
ಇದು ಸಿಎಂ ಸಿದ್ದರಾಮಯ್ಯ ಅವರ ತುಂಬಿ ತುಳುಕುತ್ತಿ ರುವ ಬೊಕ್ಕಸದ ಅಸಲಿ ಹಣೆಬರಹ ಎಂದು ವ್ಯಂಗ್ಯವಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿ.ಕೆ.ಶಿವ ಕುಮಾರ್ ಅವರೆ, ಕರ್ನಾಟಕ ದಿವಾಳಿಯಾಗಿಲ್ಲ ಎಂದು ಸುಳ್ಳು ಹೇಳುವುದನ್ನು ನಿಲ್ಲಿಸಿ, ಕೂಡಲೇ ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಅಶೋಕ್ ಒತ್ತಾಯಿಸಿದ್ದಾರೆ.

