ಮೈಸೂರು: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದಾರೆ, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆಯುವವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದು ತಿಳಿಸಿದರು.
ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿ ರುವ ಭಾಷಣವನ್ನು ಅವರು ಓದಲೇಬೇಕು,ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದು ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ.ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ,ಅದೆಲ್ಲಾ ಬರೀ ಸುಳ್ಳು ಎಂದು ಹೇಳಿದರು
ಜೆಡಿಎಸ್ ಸಮಾವೇಶದಲ್ಲಿ ನಮಗೂ ಸಮಯ ಬರುತ್ತದೆ ಎಂದು ಹೆಚ್. ಡಿ.ದೇವೇಗೌಡರು ಹೇಳಿಕೆ ನೀಡಿದ್ದಾರಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಅವರು ಯಾವ ಸಂದರ್ಭದಲ್ಲಿ ಹೇಳುತ್ತಾರೆ ಎಂದು ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ, ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದೇ ಇಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028 ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಡಕ್ಕಾಗಿ ಹೇಳಿದರಲ್ಲದೆ ಜಿಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿಸಿದರು.
ಫೆಬ್ರವರಿಯಿಂದ ಬಜೆಟ್ ಕುರಿತ ಸಭೆಗಳು ಪ್ರಾರಂಭವಾಗುತ್ತದೆ ಎಂದು ಇದೇ ವೇಳೆ ಮುಖ್ಯ ಮಂತ್ರಿಗಳು ಮಾಹಿತಿ ನೀಡಿದರು.

