ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ 47 ಕೋಟಿ ರೂ ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.
ಯಾವುದೇ ಕಾಮಗಾರಿ ಕೈಗೊಳ್ಳದಂತೆ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೋರ್ಟ್ ಎಚ್ಚರಿಕೆ ಕೂಡಾ ನೀಡಿದೆ.
ಜೊತೆಗೆ 47 ಕೋಟಿ ರೂ ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು ಆದೇಶಿಸಿದೆ.

