ಬೆಂಗಳೂರು: ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಮನವಿ ಮಾಡಿದರು.
ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು ಸಲಹೆ ನೀಡಿದರು.
ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಭಾನುವಾರ,ರಜೆ ಎಂಬುದಿಲ್ಲ, 24 ಗಂಟೆಯೂ ಕೆಲಸ ಮಾಡಬೇಕು, ಹಾಗಾಗಿ ಬರಗಾಲಕ್ಕೆ ಸಿದ್ಧತೆ ಕೈಗೊಳ್ಳುವ ಕುರಿತು ಡಿಸಿ, ಸಿಇಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.
ಈಗಾಗಲೇ ಪ್ರತಿ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಒಂದು ಕೋಟಿ ರೂ ಅನುದಾನ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

