ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ

ನವದೆಹಲಿ: ಭಾರತಾದ್ಯಂತ ವಿವಿಧ ರೈತ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೇಶದ ಬಹುತೇಕ ಪ್ರದೇಶಗಳಲ್ಲಿ ಜನಜೀವನ, ವ್ಯಾಪಾರ-ವಹಿವಾಟುಗಳು ಎಂದಿನಂತೆ ನಡೆಯುತ್ತಿದ್ದವು.
ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ, ರಸ್ತೆತಡೆ, ಅಂಗಡಿ-ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವುದು ಕಂಡುಬಂದಿತು ಅಷ್ಟೇ.
ವಾಹನಗಳ ಸಂಚಾರ ಎಂದಿನಂತೆ ಇತ್ತು. ಸರ್ಕಾರಿ, ಖಾಸಗಿ, ಬಸ್ ಸಂಚಾರ ಸೇವೆ ಎಂದಿನಂತೆ ಇತ್ತು.
ಮುಂಜಾಗೃತಾ ಕ್ರಮವಾಗಿ ದೆಶದಾದ್ಯಂತ ಶಯಾಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೆÇಲೀಸ್ ಭದ್ರತೆ ಮಾಡಲಾಗಿತ್ತು.