ಬೆಂಗಳೂರು: ಭಾರತೀಯ ಸಶಸ್ತ್ರ ಪಡೆಗಳು ಗುರುವಾರ ಹಿರಿಯ ಯೋಧರ ದಿನ ಆಚರಿಸಿದವು.
1953ರ ಈ ದಿನದಂದು ನಿವೃತ್ತರಾದ ಭಾರತೀಯ ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಸೇವೆಗಳನ್ನು ಗುರುತಿಸಿ ಈ ದಿನವನ್ನು ಹಿರಿಯ ಯೋಧರ ದಿನವಾಗಿ ಆಚರಿಸಲಾಗುತ್ತಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಗುರುವಾರ ಬೆಂಗಳೂರಿನ ವಾಯುಪಡೆಯ ಕೇಂದ್ರದಲ್ಲಿ ನಡೆದ ಹಿರಿಯ ಯೋಧರ ಸಭೆಯಲ್ಲಿ ಭಾಗವಹಿಸಿದ್ದರು.
ದಿಟ್ಟ ಸೈನಿಕರ ಕುಟುಂಬಗಳಿಗೆ ನಮ್ಮ ಬೆಂಬಲವನ್ನು ತೋರಿಸಲು ಪುಷ್ಪಮಾಲೆ ಇರಿಸುವ ಸಮಾರಂಭ ಮತ್ತು ಹಿರಿಯ ಸೈನಿಕರ ಸಭೆ ನಡೆಯಿತು.
ಯೋಧರ ಕುಟುಂಬಗಳು, ಹಿರಿಯ ಯೋಧರು ಮತ್ತು ವಿವಿಧ ಮಾಜಿ ಸೈನಿಕರ ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿದ್ದರು.

