ಮೈಸೂರು : ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರ, ಇದೊಂದು ರಾಜಕೀಯ ಪಿತೂರಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು.
ನಗರದಲ್ಲಿ ಬುಧವಾರ ಅವರು ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದರು.
ರಮೇಶ್ ಜಾರಕಿಹೊಳಿ ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ರೀತಿಯ ತಪ್ಪು ಮಾಡಿರುತ್ತಾರೆ ಅಂತ ಅನ್ನಿಸುತ್ತಿಲ್ಲ ಎಂದರು.
ನಾನು ಮೈಸೂರಿನಲ್ಲೇ ಇದ್ದೇನೆ. ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸತ್ಯಾಸತ್ಯತೆ ಪರಿಶೀಲನೆ ಆಗುವವರೆಗೂ ನೋಡೋಣ ಎಂದು ಸಚಿವರು ಹೇಳಿದರು.
ಈ ವಿಚಾರದಲ್ಲಿ ನಾನು ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ಇದ್ದೇನೆ. ಈಗಾಗಲೇ ಅವರ ಜೊತೆ ಮಾತನಾಡಿದ್ದೇನೆ, ಅವರು ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಎಂದು ಸಚಿವ ಯೋಗೇಶ್ವರ್ ತಿಳಿಸಿದರು.

