ಬೆಂಗಳೂರು: ಜಾಗತಿಕ ನಗರವಾಗಿ ಶರವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನಲ್ಲಿ 7,795 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಮೀಸಲಿಟ್ಟಿರುವುದಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹರ್ಷ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಂಕಷ್ಟ ಕಾಲದಲ್ಲೂ ಆರ್ಥಿಕ ಸಂಪನ್ಮೂಲಗಳ ಕೊರತೆ ಇದ್ದಾಗ್ಯೂ ಜನರ ಮೇಲೆ ಯಾವುದೇ ರೀತಿಯ ತೆರಿಗೆ ಹೊರೆಹಾಕದ ಮುಖ್ಯಮಂತ್ರಿಗಳು, ರಾಜ್ಯ ಮತ್ತು ರಾಜಧಾನಿಯ ಅಭಿವೃದ್ಧಿಗೆ ಅಗ್ರಪೀಠ ಹಾಕಿದ್ದಾರೆಂದು ಅವರು ಹೇಳಿದರು.
ಬೆಂಗಳೂರಿಗೆ ಬಿಜೆಪಿ ಮಾಡಿದ್ದೇನು? ಎಂದು ಯಾವಾಗಲೂ ಪ್ರಶ್ನೆ ಮಾಡುವವರಿಗೆ ಬಜೆಟ್ನಲ್ಲಿ ಸೂಕ್ತ ಉತ್ತರ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದರು.
ಮುಂಗಡ ಪತ್ರದ ಬಗ್ಗೆ, ಅದರಲ್ಲೂ ಬೆಂಗಳೂರು ಅಭಿವೃದ್ಧಿ ಬಗ್ಗೆ ಬಜೆಟ್ ಕ್ರಮಗಳ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊAಡ ಡಿಸಿಎಂ, ರಾಜಧಾನಿಯ ಬೆಳವಣಿಗೆ ಹಾಗೂ ಮುಂದಿನ ದಿನಗಳಲ್ಲಿ ಅದು ಯಾವ ದಿಕ್ಕಿನಲ್ಲಿ ಬೆಳೆಯಲಿದೆ ಎಂಬ ಬಗ್ಗೆ ಸಿಎಂ ಸ್ಪಷ್ಟ ಕಲ್ಪನೆ ಹೊಂದಿದ್ದಾರೆ ಎಂದರು.
ಬೆಂಗಳೂರಿಗೆ ಬಿಜೆಪಿ ಏನೂ ಮಾಡುತ್ತಿಲ್ಲ ಎನ್ನುವವರಿಗೆ ಸ್ಪಷ್ಟ ಉತ್ತರ -ಡಿಸಿಎಂ

