ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಉಪಗ್ರಹ ತಯಾರಿಕೆಯನ್ನು ಉತ್ತೇಜಿಸಲು ಸರಕಾರಕ್ಕೆ ಒಲವಿದೆ ಮತ್ತು ಅದಕ್ಕೆ ಅಗತ್ಯವಾದ ಬೆಂಬಲ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಯುನಿಟಿಸ್ಯಾಟ್ (UNITYsat) ಸಕ್ಸಸ್ ಮೀಟ್ನಲ್ಲಿ ‘ಐಟಿಸಿಎʼ (ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್) ಗೌರವ ಪೆಲೋಶಿಪ್ ಸ್ವೀಕರಿಸಿ ಡಿಸಿಎಂ ಅವರು ಮಾತನಾಡಿದರು.
ಪ್ರಸ್ತುತ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಾತ್ರ ಉಪಗ್ರಹ ತಯಾರಿಕೆಯಲ್ಲಿ ತೊಡಗಿದ್ದಾರೆ. ಆದರೆ ಸರಕಾರಿ ಶಾಲೆಗಳ ಮಟ್ಟದಲ್ಲಿಯೇ ಈ ರೀತಿಯ ಯೋಜನೆಯನ್ನು ಪ್ರಾರಂಭಿಸಲು ಐಟಿಸಿಎ ಮುಂದೆ ಬಂದರೆ, ಸರಕಾರ ಎಲ್ಲ ಬೆಂಬಲವನ್ನು ನೀಡುತ್ತದೆ ಎಂದು ಡಿಸಿಎಂ ಭರವಸೆ ನೀಡಿದರು.
ನಾವಿಣ್ಯತೆ ಮತ್ತು ಹೊಸತನವನ್ನು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರಕಾರವು ವಿದ್ಯಾರ್ಥಿ ಉಪಗ್ರಹ ಯೋಜನೆಗಳಿಗೆ ಯಾವಾಗಲೂ ಉತ್ತೇಜನ ನೀಡುತ್ತದೆ ಎಂದರು.
‘ಇಸ್ರೇಲ್ ಶಾಲೆಗಳುʼ ವಿದ್ಯಾರ್ಥಿಗಳ ಉಪಗ್ರಹ ಯೋಜನೆಗಳಿಗೆ ಹೆಚ್ಚು ಪೆÇ್ರೀತ್ಸಾಹ ನೀಡುತ್ತವೆ. ಅದೇ ರೀತಿ ರಾಜ್ಯದಲ್ಲೂ ವಿದ್ಯಾರ್ಥಿಗಳ ಉಪಗ್ರಹ ಯೋಜನೆಗಳನ್ನು ಪೆÇ್ರೀತ್ಸಾಹಿಸಲು ಸರಕಾರ ಉದ್ದೇಶಿಸಿದೆ. ಸ್ಥಳೀಯ ತಂತ್ರಜ್ಞಾನ ಮತ್ತು ಇತರ ಪೂರಕ ಅಂಶಗಳಿಂದಾಗಿ ಉಪಗ್ರಹಗಳ ತಯಾರಿಕೆ ವೆಚ್ಚ ಕಡಿಮೆಯಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ತಯಾರಿಸಿ ಯಶಸ್ವಿಯಾಗಿ ಉಡಾವಣೆ ಮಾಡಿದ ಯುನಿಸ್ಯಾಟ್ (3-in-1 JITsat, GHRCEsat, and SriShakthiSat) ತಂಡದಲ್ಲಿದ್ದ ಎಲ್ಲರನ್ನು ಡಿಸಿಎಂ ಗೌರವಿಸಿದರು.
ಐಟಿಸಿಎ ಅಧ್ಯಕ್ಷ ಡಾ. ಎಲ್.ವಿ. ಮಲ್ಲಿಕಾರ್ಜುನ ರೆಡ್ಡಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಪೆÇ್ರ.ಆರ್.ಎಂ.ವಾಸಗಂ, ಡಾ.ಮೈಲ್ಸಾಮಿ ಅಣ್ಣಾದುರೈ, ಇಸ್ರೋ ಚಂದ್ರಯಾನ್ ಯೋಜನೆಯ ಮಾಜಿ ನಿರ್ದೇಶಕ ಗಣೇಶನ್ ನಂಜುಂಡಸ್ವಾಮಿ, ಶಿಕ್ಷಣ ತಜ್ಞ ಡಾ.ವೂಡೇ ಪಿ.ಕೃಷ್ಣ ಮುಂತಾದವರು ಪಾಲ್ಗೊಂಡಿದ್ದರು.

