ರಾಜ್ಯ ಸರಕಾರ ವಿಫಲವಾಗಿದ್ಯ -ಹೆಚ್.ವಿಶ್ವನಾಥ್ ಪ್ರಶ್ನೆ

ಮೈಸೂರು: ರಾಜ್ಯ ಸರಕಾರ ವಿಫಲವಾಗಿದ್ಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಂಗಳವಾರ ಹೆಚ್. ವಿಶ್ವನಾಥ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕೊರೊನಾ ಬಗ್ಗೆ ರಾಜ್ಯಪಾಲರು ಮೀಟಿಂಗ್ ತೆಗೆದುಕೊಳ್ತಾರೆಂದು ಮಾಹಿತಿ ಇದೆ. ಚುನಾಯಿತ ಸರ್ಕಾರ ವಿಫಲವಾದಾಗ ಮಾತ್ರ ರಾಜ್ಯಪಾಲರು ಎಂಟ್ರಿ ಆಗ್ಬೇಕು. ಹಾಗಿದ್ರೆ ಸರ್ಕಾರ ವಿಫಲವಾಗಿದ್ಯಾ? ಎಂದವರು ಕೇಳಿದರು.
ರಾಜ್ಯದಲ್ಲಿ ತೀರ್ಮಾನ ತೆಗೆದುಕೊಳ್ಳೋದು ಮುಖ್ಯಮಂತ್ರಿ ಒಬ್ಬರೇ. ಹಾಗಾದರೆ ಕ್ಯಾಬಿನೆಟ್ ಯಾಕೆ ಬೇಕು? ಕ್ಯಾಬಿನೆಟ್ ಮಿನಿಸ್ಟರ್ ಗಳೇ ಸರ್ಕಾರ. ಆದ್ರೆ ಇಲ್ಲಿ ಏನ್ ಆಗ್ತಿದೆ ಎಂದು ಹೆಚ್.ವಿಶ್ವನಾಥ್ ಪ್ರಶ್ನಿಸಿದರು.
2 ಸಾವಿರ ಹಾಸಿಗೆ ತಂದ್ರಲ್ಲ ಅದು ಏನಾಯ್ತು? ಅದಕ್ಕೆ ಮಾಡಿದ ವ್ಯವಸ್ಥೆ ಏನಾಯ್ತು.? ವಿಶ್ವಸಂಸ್ಥೆ ಹೇಳಿದರೂ, ನೀವ್ ಏನ್ ತಯಾರಿ ಮಾಡಿಕೊಂಡಿದ್ರಿ. ಕೊರೊನಾ ಮೊದಲ ಅಲೆ ಮುಗಿದ ಮೇಲೆ ಬರೀ ಬಿಲ್ ಮಾಡೋದ್ರಲ್ಲಿ ಕಾಲ ಕಳೆದ್ರಿ. ಜನರಿಗೆ ಸೇವೆ ನೀಡುವುದರಲ್ಲಿ ಸರ್ಕಾರ ಸೋತಿದೆ. ಬರೀ ಮೀಟಿಂಗ್ ಮಾಡ್ತೀರಾ, ತೀರ್ಮಾನ ಏನಾಗಿದೆ ಹೇಳಿ ಎಂದು ತಮ್ಮದೇ ಸರ್ಕಾರದ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಹಾಗೂ ಸಚಿವರು, ಡಿಸಿಎಂ ನಡುವೆ ಸಮನ್ವಯತೆ ಹೋಗಿದೆ. ಅದು ಹೋದ ಕಾರಣವೇ ಈ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದರು.
ಐಎಸ್‍ಎಸ್ ಅಧಿಕಾರಿಗಳು ಯಾವ ಮಂತ್ರಿಯ ಮಾತನ್ನು ಕೇಳ್ತಿಲ್ಲ. ಇನ್ನಾದರೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪವರ್ ಕೊಡಬೇಕು. ನಿರ್ಧಾರ ತೆಗೆದುಕೊಳ್ಳುವ ಹಣಕಾಸು ವ್ಯವಸ್ಥೆ ಸರ್ಕಾರ ಮಾಡಿಕೊಡಬೇಕು ಎಂದು ಅವರು ಹೇಳಿದರು.
ಕೊರೊನಾ ಹೆಚ್ಚಾಗಲು ಜನರೇ ಕಾರಣವೆಂಬ ಸಚಿವ ಸುಧಾಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಸರ್ಕಾರದ ಜವಾಬ್ದಾರಿಯುತ ಮಂತ್ರಿಯ ಬೇಜವಾಬ್ದಾರಿ ಹೇಳಿಕೆ ಇದು ಎಂದರು.