ಮೈಸೂರು: ಮೈಸೂರು ಜಿಲ್ಲೆಯಲ್ಲಿ 3500 ಆಮ್ಲಜನಕಯುಕ್ತ ಹಾಸಿಗೆಗಳು ಇವೆ. ಪ್ರಸ್ತುತ 46 ಕೆ.ಎಲ್. ಆಕ್ಸಿಜನ್ ಬರುತ್ತಿದೆ. ಆಕ್ಸಿಜನ್ ಬೇಡಿಕೆ ಪೂರೈಸಲು ಜಿಲ್ಲೆಗೆ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ವೀಡಿಯೊ ಸಂವಾದದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಇಲ್ಲಿನ ಮಾಹಿತಿ ನೀಡಿದರು.
ಮೈಸೂರು ಜಿಲ್ಲೆಯಲ್ಲಿ ಸೋಂಕಿತರಿಗೆ ಆರಂಭದಲ್ಲೇ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ “ಕೋವಿಡ್ ಮಿತ್ರ” ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಮೂಲಕ 10 ಸಾವಿರಕ್ಕೂ ಹೆಚ್ಚು ಜನರಿಗೆ ಟ್ರಯೇಜ್ ಮಾಡಲಾಗಿದೆ ಎಂದು ಹೇಳಿದರು.
ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಜಿಲ್ಲೆಯ 150 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಮಿತ್ರವನ್ನು ತೆರೆಯಲಾಗಿದೆ ಎಂದು ಹೇಳಿದರು.
ಮೊದ ಮೊದಲು ನಗರ ಪ್ರದೇಶಗಳಲ್ಲಿ ಶೇ. 90ರಷ್ಟು ಕೋವಿಡ್ ಪ್ರಕರಣಗಳು ಹಾಗೂ ಶೇ.10ರಷ್ಟು ಕೋವಿಡ್ ಪ್ರಕರಣಗಳು ತಾಲ್ಲೂಕುಗಳಲ್ಲಿ ದಾಖಲಾಗುತ್ತಿದ್ದವು. ಈಗ ಪರಿಸ್ಥಿತಿ ಬದಲಾಗಿದೆ ಎಂದರು.
ಈಗ ಶೇ. 50ರಷ್ಟು ಕೋವಿಡ್ ಪ್ರಕರಣಗಳು ನಗರ ಪ್ರದೇಶಗಳಲ್ಲಿ ಬರುತ್ತಿದ್ದರೆ ಶೇ. 50ರಷ್ಟು ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುತ್ತಿದೆ ಎಂದರು.
ಸಭೆಯಲ್ಲಿ ನಗರ ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ.ಬಿ.ರಿಷ್ಯಂತ್, ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಮೈಸೂರು ಮೆಡಿಕಲ್ ಕಾಲೇಜಿನ ಡೀನ್ ಡಾ. ನಂಜರಾಜ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ಸೇರಿದಂತೆ ಇತರರು ಹಾಜರಿದ್ದರು.
ಮೈಸೂರಿಗೆ ಇನ್ನೂ ಹೆಚ್ಚಿನ ಆಕ್ಸಿಜನ್ ಬೇಕು; ಸಿಎಂ ವೀಡಿಯೋ ಸಂವಾದದಲ್ಲಿ ಡಿಸಿ ರೋಹಿಣಿ ಸಿಂಧೂರಿ ಮನವಿ

