ಮಡಿಕೇರಿ: ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯಾಗಲಿದೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿದರು.
ಆಕ್ಸಿಜನ್ ಘಟಕ ಸ್ಥಾಪನೆಗೆ ಪೂರಕವಾದ ಕಟ್ಟಡ ನಿರ್ಮಾಣವಾಗಬೇಕಿದೆ. ಈ ಆಕ್ಸಿಜನ್ ಘಟಕವು ಒಂದು ನಿಮಿಷಕ್ಕೆ ಒಂದು ಸಾವಿರ ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮಥ್ಯ ಹೊಂದಿದೆ ಎಂದು ಅವರು ತಿಳಿಸಿಸಿದರು.
ಈ ಯೋಜನೆ ಕೇಂದ್ರ ಸರ್ಕಾರದ ನೆರವಿನಿಂದ ಅನುಷ್ಠಾನಗೊಳ್ಳುತ್ತಿದೆ. ಯೋಜನೆಯ ಎಲ್ಲ ಜವಾಬ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸಲಾಗಿದೆ ಎಂದರು.
ವಿರಾಜಪೇಟೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರ ಯತ್ನದಿಂದ ದಾನಿಗಳ ಸಹಕಾರದಿಂದ ಆಕ್ಸಿಜನ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ. ಇದೀಗ ಮಡಿಕೇರಿಯಲ್ಲೂ ಘಟಕ ಸ್ಥಾಪಿಸಲಾಗುತ್ತಿದ್ದು, ಮುಂದೆ ಸೋಮವಾರಪೇಟೆಯಲ್ಲೂ ಘಟಕ ಸ್ಥಾಪನೆಯಾದರೆ ಕೊಡಗಿನ ಆಕ್ಸಿಜನ್ ಬೇಡಿಕೆಯನ್ನು ಇಲ್ಲೇ ಪೂರೈಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಂಸದರು ಹೇಳಿದರು.

