ಪ್ರಾಣಿಪಕ್ಷಿ ಹಿತ ಕಾಪಾಡುವುದು ನಾಗರೀಕರ ಕರ್ತವ್ಯ – ದತ್ತ ಶ್ರೀ ಕೃಷ್ಣ ಮಿತ್ತಲ್

ಮೈಸೂರು: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣಾ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ವಲಯ ಅಧ್ಯಕ್ಷರಾಗಿ ನೇಮಕಗೊಂಡ ದತ್ತ ಶ್ರೀ ಕೃಷ್ಣ ಮಿತ್ತಲ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರಂತರವಾಗಿ 50 ದಿನಗಳಿಂದ ಕೆಎಂಪಿಕೆ ಟ್ರಸ್ಟ್ ಸದಸ್ಯರು 200ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಪೌಷ್ಠಿಕ ಆಹಾರ ನೀಡುತ್ತಾ ಬಂದಿದ್ದು ಇಂದು 50ನೇ ದಿನ. ಆ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ವಲಯ ಅಧ್ಯಕ್ಷ ಡಾ. ಶ್ರೀಕೃಷ್ಣ ಮಿತ್ತಲ್ ಅವರು ಮಹಾರಾಜ ಕಾಲೇಜು ಮೈದಾನದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿ ಟ್ರಸ್ಟ್ನ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ಎಸ್.ಕೆ ಕೃಷ್ಣ ಮಿತ್ತಲ್ ರವರು ಮಾತನಾಡಿ, ಕರ್ನಾಟಕದಲ್ಲಿ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳ ಸಂತತಿ ಕಾಪಾಡುವುದು ಮುಖ್ಯವಾಗಿದೆ. ಅದರಂತೆಯೇ ನಗರಪ್ರದೇಶದಲ್ಲಿ ನಾಗರೀಕತೆಯೊಂದಿಗೆ ಹೊಂದಿಕೊಂಡಿರುವ ಪ್ರಾಣಿಪಕ್ಷಿಗಳ ಹಿತವನ್ನು ಕಾಪಾಡುವುದು ನಾಗರೀಕರ ಕರ್ತವ್ಯ ಎಂದರು.

ಕೆಎಂಪಿಕೆ ಟ್ರಸ್ಟ್ ಲಾಕ್ ಡೌನ್ ಸಂದರ್ಭದಲ್ಲಿ ಬೀದಿ ನಾಯಿಗಳಿಗೆ ನಿರಂತರವಾಗಿ ಆಹಾರ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಎಲ್. ಆರ್ ಮಹದೇವಸ್ವಾಮಿ ಮಾತನಾಡಿ, ನಗರ ಬಡಾವಣೆಗಳಲ್ಲಿ ಸಾಕು ಪ್ರಾಣಿಗಳ ಮತ್ತು ಬೀದಿ ಪ್ರಾಣಿಗಳ ಆಹಾರ, ಆರೈಕೆ ನಿರ್ವಹಣೆಗೆ ನಗರಪಾಲಿಕೆ ಯೋಜನೆ ರೂಪಿಸಿ ಪ್ರಾಣಿ ಸೇವಾ ಸಂಘವನ್ನು ಬಳಸಿಕೊಂಡು ಸಹಾಯ ಧನ ನೀಡಲು ಮುಂದಾಗಬೇಕಿದೆ ಎಂದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ರವರು ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರಪಾಲಿಕೆ ವಲಯ ಮಟ್ಟದಲ್ಲಿ ವಾರ್ಡ್ ವಾರು ಪ್ರಾಣಿ ಪಕ್ಷಿಗಳ ಸೇವಾ ಸಂಘಗಳನ್ನ ಮತ್ತು ಸ್ವಯಂ ಸೇವಕರನ್ನ ಗುರುತಿಸಿ ಪ್ರಾಣಿಪಕ್ಷಿ ರಕ್ಷಣೆಗೆ ಆಹಾರ ಆರೋಗ್ಯ ತಪಾಸಣೆಗೆ ಮುಂದಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಲಕ್ಷ್ಮೀದೇವಿ, ನವೀನ್ ಕುಮಾರ್, ಬಿಜೆಪಿ ಮೈಸೂರು ನಗರ ಹಿಂದುಳಿದ ಮೋರ್ಚಾ ಅಧ್ಯಕ್ಷ ಜೋಗಿ ಮಂಜು, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಬಿಜೆಪಿ ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಲೋಹಿತ್, ರಾಕೇಶ್ ಕುಂಚಿಟಿಗ, ನವೀನ್, ಚಂದ್ರು, ಜೀವನ್ ಹಾಗೂ ಇನ್ನಿತರರು ಇದ್ದರು.