ಹುಬ್ಬಳ್ಳಿ: ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದರು.
ಹಾನಗಲ್ ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆಂದು ಅವರು ತಿಳಿಸಿದರು.
ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.
ನಾನು ಸಿಎಂ ಆದ ಮೇಲೆ ಹಾವೇರಿಗೆ ಎನೂ ಕೊಟ್ಟಿದ್ದೇನೆ ಅಂತಾ ಮನೋಹರ್ ತಹಶಿಲ್ದಾರರನ್ನ ಕೇಳಲಿ. ನಾನು 2400 ಕೋಟಿ ಕೊಟ್ಟಿದ್ದೇನೆ. ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆಂದರು.
ಜನರು ಹೇಳುತ್ತಿದ್ದಾರೆ ಅವರಿಗೆ ಅಭಿವೃದ್ಧಿ ಬಗ್ಗೆ ಹೇಳಲು ಎನೂ ಇಲ್ಲ. ಅದಕ್ಕೆ ದುಡ್ಡು ಖರ್ಚು ಮಾಡುತ್ತಿದ್ದಾರೆ.
ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆಂದು ಸಿದ್ದರಾಮಯ್ಯ ಟೀಕಿಸಿದರು.
ದುಡ್ಡು ಹಂಚಿಕೆ ಬಗ್ಗೆ ಆಯೋಗಕ್ಕೆ ದೂರು ನೀಡುವುದನ್ನ ಅವರ ಬಳಿ ಹೇಳಿಸಿಕೊಂಡು ಮಾಡಬೇಕಾ? ಅದನ್ನ ನಾವೂ ಮಾಡ್ತೀವಿ ಎಂದು ಸಿದ್ದರಾಮಯ್ಯವರು ಹೇಳಿದರು.
ಕಾಂಗ್ರೆಸ್ ಜಾತಿ ಧರ್ಮಗಳನ್ನ ಒಡೆಯುವ ಕೆಲಸ ಮಾಡುತ್ತಿದ್ದಾರೆ ಅಂತಾ ಸಿಎಂ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮಗೆ ಅದು ಗೊತ್ತಿಲ್ಲ. ಅವರ ಬಳಿ ಮುಸ್ಲಿಂ ಮಂತ್ರಿ ಇದಾರಾ? ಅವರನ್ನ ಯಾಕೆ ಸಚಿವರನ್ನಾಗಿ ಮಾಡಲಿಲ್ಲ ಎಂದರು.
ಕೋವಿಡ್ ನೂರು ಕೋಟಿ ಅಂತಾ ಸಂಭ್ರಮ ಮಾಡ್ತಾ ಇದ್ದಾರೆ. 29 ಕೋಟಿ ಮಂದಿಗೆ ಮಾತ್ರ ಎರಡು ಡೋಸ್ ನೀಡಿದ್ದಾರೆ. 42 ಕೋಟಿ ಮಂದಿಗೆ ಮೊದಲ ಡೋಸ್ ನೀಡಿದ್ದಾರೆ. ಸತ್ತವರ ಸಂಖ್ಯೆ 52 ಲಕ್ಷ. ಆಕ್ಸಿಜನ್ ಬೆಡ್. ಔಷಧಿ ಕೊಡದೇ ಇರುವುದಕ್ಕೆ 50 ಲಕ್ಷ ಜನರು ಸತ್ತಿದ್ದಾರೆಂದು ಅವರು ಹೇಳಿದರು.

