ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ

ನವದೆಹಲಿ: ಸೋಮವಾರ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪಾರ್ಥಿವ ಶರೀದ ಅಂತ್ಯ ಸಂಸ್ಕಾರ ನೆರವೇರಿತು.
ದೆಹಲಿಯ ಲೋಧಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ಪ್ರಣಬ್ ಮುಖರ್ಜಿ ಅವರ ಅಂತ್ಯ ಸಂಸ್ಕಾರವನ್ನು ಅವರ ಪುತ್ರ ಅಭಿಜಿತ್ ಮುಖರ್ಜಿ ಮಂಗಳವಾರ ನೆರವೇರಿಸಿದರು.
ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಅರ್ಪಿಸಲಾಯಿತು.
ಪ್ರಣಬ್ ಮುಖರ್ಜಿ ಅವರ ನಿಧನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 7 ದಿನಗಳ ಶೋಕಾಚರಣೆ ಘೋಷಿಸಿದೆ. ಸೆ. 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧ ಮಟ್ಟದಲ್ಲಿ ಹಾರಾಡುತ್ತದೆ.