ಹೊಳೆ ನರಸೀಪುರದ ಹೆಚ್. ಡಿ. ರೇವಣ್ಣ ನಿವಾಸದಲ್ಲಿ ಎಸ್ಐಟಿ ಸ್ಥಳ ಮಹಜರು

ಹೊಳೆ ನರಸೀಪುರ: ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್ ಐಟಿ ಮತ್ತು ಪೊಲೀಸರು ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ಮಾಡಿದರು.

ಸಂತ್ರಸ್ತ ಮಹಿಳೆಯೊಂದಿಗೆ ಶನಿವಾರ ಬೆಳಿಗ್ಗೇನೆ ಐದು ವಾಹನಗಳಲ್ಲಿ ಬಂದ ಎಸ್ ಐಟಿ ತಂಡಕ್ಕೆ ಹಾಸನ ಎಎಸ್ ಪಿ ತಮ್ಮಯ್ಯ ಅವರನ್ನೊಳಗೊಂಡ ಸ್ಥಳೀಯ ಪೊಲೀಸರು ಸಾಥ್ ನೀಡಿದರು.

ರೇವಣ್ಣ ಅವರ ನಿವಾಸದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು,ಹಾಗಾಗಿ ಇಂದು ಸ್ಥಳ ಮಹಜರು ನಡೆಸಲಾಯಿತು. ಅಡುಗೆ ಮನೆ, ಬೆಡ್ ರೂಮ್, ಸ್ಟೋರ್ ರೂಮ್ ಸೇರಿದಂತೆ ಮನೆಯ ಎಲ್ಲಾ ಕಡೆಗಳಲ್ಲಿ ಶೋಧ ನಡೆಸಲಾಯಿತು.

ಅಧಿಕಾರಿಗಳು ಮಹಜರು ಪ್ರಕ್ರಿಯೆ ವಿಡಿಯೋ ಮಾಡಿ, ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಂಡರು.

ಸ್ಥಳ ಮಹಜರು ವೇಳೆ ರೇವಣ್ಣ ಅವರ ಪತ್ನಿ ಭವಾನಿ ಮನೆಯಲ್ಲೇ ಇದ್ದರು ಜತೆಗೆ ರೇವಣ್ಣ ಪರ ವಕೀಲರು, ಜೆಡಿಎಸ್ ನಾಯಕರು ಹಾಜರಿದ್ದರು.