ಬೆಂಗಳೂರು: ಸತತ ಆರೋಪಗಳು ಕೇಳಿ ಬಂದ ಕಾರಣ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಪಡಿಸಲಾಗಿದೆ.
ಈ ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪ್ರಜ್ವಲ್ ಅಮಾನತಿಗೆ ನಿನ್ನೆಯೇ ನಿರ್ಧಾರ ಮಾಡಲಾಗಿತ್ತು, ತಪ್ಪು ಯಾರೇ ಮಾಡಿದರೂ ತಪ್ಪೇನೆ,ಎಸ್ ಐ ಟಿ ತನಿಖೆಯ ವರದಿ ಬಂದ ಬಳಿಕ ಈ ಬಗ್ಗೆ ಮಾತನಾಡುವೆ ಎಂದು ಹೇಳಿದರು.
ಪೆನ್ಡ್ರೈವ್ ಸುಳಿಯಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆತ ಮನುಷ್ಯನಲ್ಲ, ದೇವೇಗೌಡರ ಮೊಮ್ಮಗ ಅಂತ ಬಿಡಬಾರದು,ಕೂಡಲೇ ಪ್ರಜ್ವಲ್ ಬಂಧಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ಪ್ರಜ್ವಲ್ ಅಮಾನತು ಮಹತ್ವ ಪಡೆದುಕೊಂಡಿದೆ, ಪ್ರಜ್ವಲ್ ಪ್ರಕರಣವನ್ನು ಈಗಾಗಗಲೇ ಎಸ್ಐಟಿ ಕೈಗೆತ್ತಿಕೊಂಡಿದೆ.
ಹೊಳೆ ನರಸಿಪುರದಲ್ಲಿ ದಾಖಲಾಗಿರುವ ಎಫ್ ಐಆರ್ ಅಧಾರದ ಮೇಲೆ ತನಿಖೆ ನಡೆಸಲಿದೆ,ಆದರೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.