ನಟ ಉಪೇಂದ್ರಗೆ ಬಿಗ್ ರಿಲೀಫ್

ಬೆಂಗಳೂರು: ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.

ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.

ಏತನ್ಮಧ್ಯೆ  ಉಪೇಂದ್ರ ಪರ ವಕೀಲರು ಹೈಕೋರ್ಟ್ ನಲ್ಲಿ  ಅರ್ಜಿ ಸಲ್ಲಿಸಿ, ಎಫ್ ಐ ಆರ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರ.

ಇದನ್ನು ಮಾನ್ಯ ಮಾಡಿದ ಏಕ ಸದಸ್ಯ ನ್ಯಾಯ ಪೀಠ ಎಫ್ಐಆರ್ ಹಾಗು ವಿಚಾರಣೆಗೆ ತಡೆ ನೀಡಿದೆ.

ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಎಂದು ಉಪೇಂದ್ರ ಪರವಾಗಿ ಹಿರಿಯ ವಕೀಲ ಉದಯ್ ಹೊಳ್ಳ ಮನವಿ ಮಾಡಿಕೊಂಡಿದ್ದರು.

ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.