ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ಮಾಡಿದ್ದಾರೆ.

ಬೆಂಗಳೂರು ಮಹಾ ನಗರ ಪಾಲಿಕೆ ಮುಖ್ಯ ಎಂಜಿನಿಯರ್‌ ರಂಗನಾಥ್‌ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿ ಶಾಕ್ ನೀಡಿದ್ದಾರೆ.

ಬೆಂಗಳೂರಲ್ಲದೆ ರಾಜ್ಯದ 58 ಕಡೆಗಳಲ್ಲಿ 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿ 25 ಇನ್ಸ್‌ಪೆಕ್ಟರ್ ಸೇರಿ 130 ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ದೂರು ಬಂದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ  ಏಕಕಾಲಕ್ಕೆ ಬೀದರ್‌ನಲ್ಲಿ ಮೂರು ಕಡೆ ಹಾಗೂ ಕಲಬುರಗಿಯಲ್ಲಿ ಒಂದು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಕಾರಂಜಾ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ ಸ್ವಾಮಿ ನಿವಾಸಗಳು ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.

ಬೀದರ್ ನಗರದ ವೀರಭದ್ರೇಶ್ವರ ಕಾಲೋನಿಯ ನಿವಾಸ, ಭಾಲ್ಕಿ ತಾಲೂಕಿನ ನಾಗೂರು ಗ್ರಾಮದ ನಿವಾಸ, ಬೀದರ್ ನಗರದ ಕಾರಂಜಾ ಕಚೇರಿ ಹಾಗೂ ಕಲಬುರಗಿಯ ಹಳೆ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.